ವಿಜಯಪುರ: ಅಪರಿಚಿತ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆಗೈದು ಜಮೀನಿನಲ್ಲಿ ಎಸೆದು ಎಸ್ಕೇಪ್ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಉಣ್ಣಿಬಾವಿ ಕ್ರಾಸ್ ಬಳಿ ನಡೆದಿದೆ. ಇನ್ನೂ ಸುಮಾರು 30-35 ವಯಸ್ಸಿನ ಮಹಿಳೆಯನ್ನು ಹತ್ಯೆಗೈದು ತದನಂತರ ಮುಖದ ಮೇಲೆ ಕಲ್ಲು ಎಸೆದು ಮುಖದ ಗುರುತು ಸಿಗದಂತೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಡಗುಂದಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.