ಯಾದಗಿರಿ: ಶವ(Body) ಸಾಗಿಸುತ್ತಿದ್ದ ಅಂಬ್ಯುಲೆನ್ಸ್ (Ambulance) ಏಕಾಏಕಿ ಪಲ್ಟಿಯಾಗಿರುವ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿಯ ಪಕ್ಕದಲ್ಲಿ ಅಂಬ್ಯೂಲೆನ್ಸ್ (Accident) ಪಲ್ಟಿಯಾಗಿದೆ. ಇದರಿಂದ ಆಂಬ್ಯುಲೆನ್ಸ್ ಚಾಲಕನಿಗೆ ಸಣ್ಣಪುಟ್ಟ ಗಾಯಾಳಾಗಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಕಲಬುರಗಿ ನಗರದ ನಿವಾಸಿ ರಾಜು (45) ನಿನ್ನೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ಅದಕ್ಕಾಗಿ ಬೆಂಗಳೂರಿನಿಂದ ಕಲಬುರ್ಗಿಗೆ ಅಂಬ್ಯುಲೆನ್ಸ್ ಮೂಲಕ ಶವ ಸಾಗಿಸುತ್ತಿದ್ದರು. ದಾರಿಯ ಮಧ್ಯದಲ್ಲಿ ಅಂಬ್ಯುಲೆನ್ಸ ಪಲ್ಟಿಯಾಗಿದೆ. ಘಟನೆ ಬಳಿಕ ಬೇರೆ ವಾಹನದಲ್ಲಿ ಕುಟುಂಬಸ್ಥರು ಶವ ಸಾಗಿಸಿದರು. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.