ವಿಜಯಪುರ: ತಂದೆಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಆರು ವರ್ಷದ ಬಾಲಕ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಶಿರೋಳ ಬಳಿಯ ಚಿಮ್ಮಲಗಿ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಮುದ್ದೇಬಿಹಾಳ ಪಟ್ಟಣದ ಮಹಿಬೂಬ ನಗರ ನಿವಾಸಿ ರಿಜ್ವಾನ್ ಅಲ್ಲಾಭಕ್ಷ ತಾರಾಘರ (6) ಎಂದು ಗುರುತಿಸಲಾಗಿದೆ.
ಮುದ್ದೇಬಿಹಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ.