ವಿಜಯಪುರ: ಬಸ್ ಸಂಚಾರ ವೇಳೆ ಡ್ರೈವರ್ ಹೃದಯಾಘಾತದಿಂದ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಇನ್ನೂ ಈ ವೇಳೆ ಕಂಡೆಕ್ಟರ್ ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ. ಅಲ್ಲದೇ, ಮುರಿಗೆಪ್ಪ ಅಥಣಿ ಹೃದಯಾಘಾತದಿಂದ ಸಾವನ್ನಪ್ಪಿದ ಡ್ರೈವರ್ ಆಗಿದ್ದು,
ಕಲ್ಬುರ್ಗಿ ಜಿಲ್ಲೆಯ ಅಪ್ಜಲಪುರದಿಂದ ವಿಜಯಪುರಕ್ಕೆ ಬಸ್ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಬಸ್ ಹೆಡ್ ಲೈಟ್ ಸಮಸ್ಯೆಯಿಂದ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಸಿಂದಗಿ ಡಿಪೋಗೆ ಹೊರಟಿದ್ದ ಬಸ್ನಿಂದ ಈ ಅವಘಡ ಆಗಿದೆ. ದಾರಿ ಮಧ್ಯೆ ಡ್ರೈವರ್ ಮುರಿಗೆಪ್ಪ ಅಥಣಿಗೆ ಹೃದಯಾಘಾತ, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪೆಟ್ರೋಲ್ ಬಂಕ್ ನುಗ್ಗುತ್ತಿದ್ದ ಬಸ್ನ್ನ ಬ್ರೇಕ್ ಹಿಡಿದು ಕಂಡೆಕ್ಟರ್ ಶರಣು ಟಾಕಳಿ ನಿಲ್ಲಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬಸ್ ಡ್ರೈವರ್ ಸಾವು, ತಪ್ಪಿದ ಅನಾಹುತ
![](https://karnataka1news.com/wp-content/uploads/2023/05/bus-860x637.jpg)