ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣು ಇರಿಸಲಾಗಿದ್ದು ಇಲ್ಲಿಯವರೆಗೆ ಒಟ್ಟು 7,08,58,017 ರೂ. ಮೌಲ್ಯದ ನಗದು, ಮಧ್ಯ ಮೊದಲಾದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 27 ಚೆಕ್ ಫೊಸ್ಟ್ ಸ್ಥಾಪಿಸಿ ಹದ್ದಿನ ಕಣ್ಣು ಸ್ಥಾಪಿಸಲಾಗಿದೆ, ಈಗಾಗಲೇ ಕೋಟ್ಯಂತರ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ಒಟ್ಟು 2,46,17,540 ನಗದು, 12,731 ಲೀ. ಮಧ್ಯ, 73.889 ಮಾದಕ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಆ ಪೈಕಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ 12 ಲಕ್ಷ ರೂ. ನಗದು, 61.420 ಲೀ. ಮಧ್ಯ, 3,08,78,555 ರೂ, ಮೌಲ್ಯದ ವಸ್ತುಗಳು ಸೇರಿದಂತೆ ಒಟ್ಟು 3,21,04,853 ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.
ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಲ್ಲಿ 291.07 ಮಧ್ಯ, 1,00,000 ರೂ. ಮೌಲ್ಯದ ಇತರೆ ವಸ್ತುಗಳು ಸೇರಿದಂತೆ ಒಟ್ಟು 2,08,285 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.
ಬಸವನ ಬಆಗೇವಾಡಿ ವಿಧಾನಸಭಾ ಕ್ಷೇತ್ರದಲ್ಲಿ 20,94,500 ರೂ. ನಗದು, 262 ಲೀ. ಮಧ್ಯ ಸೇರಿದಂತೆ ಒಟ್ಟು 21,58,815 ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.
ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ 23,10,000 ರೂ. ನಗದು, 238.76 ಲೀ. ಮಧ್ಯ, 15,96,945 ಇತರೆ ವಸ್ತು ಸೇರಿದಂತೆ ಒಟ್ಟು 47,03,957 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 49,46,500 ರೂ. ನಗದು, 194.25 ಲೀ ಮಧ್ಯ, 2.028 ಕೆಜಿ ಮಾದಕ ವಸ್ತುಗಳು, ಇತರೆ 589316 ವಸ್ತುಗಳು ಸೇರಿದಂತೆ ಒಟ್ಟು 6245029 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು. ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ 81,23,740 ರೂ. ನಗದು, 9476 ಲೀ. ಅಕ್ರಮ ಮಧ್ಯ ಸೇರಿದಂತೆ ಒಟ್ಟು 1,46,87,397 ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ, ಅದೇ ತೆರನಾಗಿ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ 48,42,800 ರೂ. ನಗದು, 225.64 ಲೀ. ಮಧ್ಯ, 70.955 ಮಾದಕ ವಸ್ತುಗಳು ಸೇರಿದಂತೆ 8448544 ರೂ. ಮೌಲ್ಯದ ವಸ್ತುಗಳನ್ನು ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 11 ಲಕ್ಷ ರೂ. ನಗದು, 478.58 ಲೀ. ಮಧ್ಯ ಸೇರಿದಂತೆ ಒಟ್ಟು 23,01,124 ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು. ಚುನಾವಣೆ ಸಂದರ್ಭದಲ್ಲಿ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿಯೂ ಜಿಲ್ಲಾಡಳಿತ ಸಕಲ ಕ್ರಮ ಕೈಗೊಂಡಿದ್ದು 27 ಚೆಕ್ಫೋಸ್ಟ್ಗಳನ್ನು ಸ್ಥಾಪಿಸಿದೆ, ಈ ಚೆಕ್ಪೋಸ್ಟ್ಗಳ ಫೈಕಿ 11 ಅಂತರ್ ರಾಜ್ಯ ಚೆಕ್ ಫೋಸ್ಟ್, 16 ಅಂತರ್ ಜಿಲ್ಲಾ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ದೂರು ನಿರ್ವಹಣಾ ಕೋಶ
ಜಿಲ್ಲಾ ಹಂತದಲ್ಲಿ ಹಾಗೂ ವಿಧಾನಸಭಾ ಕ್ಷೇತ್ರವಾಗು ದೂರು ನಿರ್ವಹಣಾ ಕೋಶವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ಚುನಾವಣಾ ವಿಷಯದ ಕುರಿತು ದೂರು ಸಲ್ಲಿಸಲು ಈ ಕೋಶ ಆರಂಭಿಸಲಾಗಿದುದ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ಧರಾಮಯ್ಯ ಬರಗಿಮಠ ಅವರನ್ನು ಈ ಕಾರ್ಯಕ್ಕೆ ಜಿಲ್ಲಾ ನೋಡೆಲ್ ಅಧಿಕಾರಿ ಎಂದು ನಿಯೋಜಿಸಲಾಗಿದ್ದು, ಜಿಲ್ಲಾ ಹಂತದ ದೂರವಾಣಿ ನಿರ್ವಹಣಾ ಕೋಶದ ಸಂಖ್ಯೆ 08352-221222, 222101, 221261 ಸಂಖ್ಯೆಗೆ ಸಂಪರ್ಕಿಸಿ ದೂರು ದಾಖಲಿಸಬಹುದಾಗಿದೆ, ವಿಧಾನಸಭಾ ಕ್ಷೇತ್ರವಾರು ಸಹ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ದಾನಮ್ಮನವರ ವಿವರಿಸಿದರು.
ಚುನಾವಣೆಗೆ ಸಂಬAಧಿಸಿದAತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗುವ ಕುರಿತು ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಿ-ವಿಜಿಲ್ ತಂತ್ರಾಂಶವನ್ನು ಮೊಬೈಲ್ನಲ್ಲಿ ಡೌನ್ಲೋಡ್ ಮಾಡಿಕೊಂಡು ಈ ತಂತ್ರಾಶದ ಮೂಲಕವೇ ದೂರು ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ, ಮತದಾರರ ಅನುಕೂಲಕ್ಕಾಗಿ 1950 ಸಂಖ್ಯೆಯ ವಿಶೇಷ ಟೋಲ್ಫ್ರೀ ಸಹಾಯವಾಣಿ ಆರಂಭಿಸಲಾಗಿದೆ ಎಂದು ವಿವರಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಎಚ್.ಡಿ. ಆನಂದಕುಮಾರ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಬಿಗಿ ಪೊಲೀಸ್ ಬಂದೋಬಸ್ತ್ ಕುರಿತು ವಿವರಣೆ ನೀಡಿದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.