ವಿಜಯಪುರ: ಚಲಿಸುತ್ತಿದ್ದ ಲಾರಿಯ ಟೈರ್ ಒಡೆದು ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಅಬ್ಬಿಹಾಳ ಕ್ರಾಸ್ ಬಳಿ ಘಟನೆ.
ಇನ್ನು ಬಳ್ಳಾರಿಯಿಂದ ಔರಂಗಾಬಾದಗೆ ಕಲ್ಲಿದ್ದಿಲು ಪುಡಿ ಸಾಗಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಬೆಂಕಿಗಾಹುತಿ ಆಗಿದೆ. ಅಲ್ಲದೇ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದರು. ಅದೃಷ್ಠ ವಶಾತ್ ಯಾವುದೇ ಪ್ರಾಣಹಾನಿ ಇಲ್ಲ. ಈ ಘಟನೆ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.