ಬಾಗಲಕೋಟೆ; ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದಲ್ಲಿ ನಡೆದಿದೆ. ಮೂವರು ಮಕ್ಕಳು ಮೃತ ಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ತಾಯಿ ಪಾರಾಗಿದ್ದಾಳೆ. ಕುಂಬಾರಹಳ್ಳ ಗ್ರಾಮದ ತೋಟದ ಮನೆಯಲ್ಲಿ ಇರುವ ನಿವಾಸಿ ಸಂಗೀತಾ ಹನಮಂತ ಗುಡೆಪ್ಪಗೋಳ(28) ಪ್ರಾಣಾಪಾಯದಿಂದ ತಾಯಿ ಪಾರಾಗಿದ್ದಾಳೆ. 15 ದಿನದ ಹೆಣ್ಣು ಶಿಶು, 6 ವರ್ಷದ ಶ್ರೀಶೈಲ,4 ವರ್ಷದ ಶ್ರಾವಣಿ ಎಂಬುವವರು ಮೃತಪಟ್ಟಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪಿ.ಎಸ್.ಐ ಮಹೇಶ ಸಂಖ, ಸಿಪಿಐ ಮಲ್ಲಪ್ಪ ಮಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಗೀತಾ ಆತ್ಮಹತ್ಯೆ ಯತ್ನಕ್ಕೆ ಖಚಿತ ಕಾರಣ ಗೊತ್ತಾಗಿಲ್ಲ. ತನಿಖೆ ಬಳಿಕವೇ ಗೊತ್ತಾಗಲಿದೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣ ದಾಖಲಾಗಿದೆ.