ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಅಂಗಡಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿರುವ ಘಟನೆ ವಿಜಯಪುರ ನಗರದ ರಾಮಮಂದಿರದ ಬಳಿ ನಡೆದಿದೆ. ಇನ್ನು ಚಿಕ್ಕ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಕಿಡಿಗೇಡಿಗಳು ಅಂಗಡಿಯ ಮೇಲೆ ಕಲ್ಲು ತೂರಾಟ ನಡೆಸಿ, ಅಂಗಡಿಯ ಗ್ಲಾಸ್ ಒಡೆದು ಹಾಕಿದ್ದಾರೆ. ಅಲ್ಲದೇ, ಪಕ್ಕದ ಗೋಬಿ ಅಂಗಡಿಯ ವಿವಿಧ ವಸ್ತುಗಳನ್ನು ಹಾನಿ ಮಾಡಿದ್ದಾರೆ. ಆದ್ರೇ, ಗಲಾಟೆ ಯಾವ ಕಾರಣಕ್ಕೆ ಆಗಿದೆ ಎಂದು ತಿಳಿದುಬಂದಿಲ್ಲ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/08/IMG-20230810-WA0190-1024x461.jpg)