ಮೈಸೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಘಟನೆ ಸಂಭವಿಸಿದೆ. ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಿನಾಥ್ ಎಂಬುವರ ಮಗಳು ನೇಣಿಗೆ ಶರಣಾಗಿದ್ದಾಳೆ. ಘಟನೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ನಜರ್ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.