ವಿಜಯಪುರ: ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ನಾಮಪತ್ರ ಸಲ್ಲಿಕೆ ಬಳಿಕ ವಾರ್ಡ್ ನಂಬರ.22ರ ಅಭ್ಯರ್ಥಿಯಾಗಿದ್ದ ರವಿಕಾಂತ ಬಗಲಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.
ಅದಕ್ಕಾಗಿ ಪಕ್ಷೇತರವಾಗಿ ಕಣಕ್ಕಿದ್ದೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಸಂಘಟನೆಗಾಗಿ ಸಾಕಷ್ಟು ಶ್ರಮಿಸಿದ್ದೇನೆ. ಆದರೆ ಪಕ್ಷದಿಂದ ಯಾರಿಗೂ ಅನ್ಯಾಯ ಆಗಿಲ್ಲ. ಕೇವಲ ಒಬ್ಬ ವ್ಯಕ್ತಿಯಿಂದ ಬಹುತೇಕ ವಾರ್ಡ್ ಗಳಲ್ಲಿ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ.
ಅಲ್ಲದೇ, ನಾನು ಹಲವು ವರ್ಷಗಳಿಂದ ಶ್ರಮಿಸುತ್ತಿದ್ದರೂ ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಹೀಗಾಗಿ ತಕ್ಷಣದಿಂದಲೇ ಪಕ್ಷದ ವರಿಷ್ಠರಿಗೆ ರಾಜೀನಾಮೆ ಸಲ್ಲಿಸುವೆ ಎಂದರು.