ಬೆಂಗಳೂರು: ಕಳೆದ ಕೆಲ ದಿನಗಳಿಂದ ವರ್ಗಾವಣೆಗಾಗಿ ಪರದಾಡುತ್ತಿದ್ದ ರಾಜ್ಯದ ಪೊಲೀಸರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ಸಬ್ ಇನ್ಸ್ ಪೆಕ್ಟರ್ ಹುದ್ದೆಯಿಂದ ಕೆಳ ಹಂತದ ಅಧಿಕಾರಿಗಳು, ಆಡಳಿತ ಸಿಬ್ಬಂದಿಗಳನ್ನು ಅಂತರ್ ಜಿಲ್ಲಾ ಘಟಕ ಮತ್ತು ವಲಯ ವರ್ಗಾವಣೆಗೆ ಒಪ್ಪಿಗೆ ಸೂಚನೆ ನೀಡಲಾಗಿದೆ. ಈ ವರ್ಗಾವಣೆ ಸಂಬಂಧ ಅಧಿಸೂಚನೆಯನ್ನು ಕೂಡಾ ಹೊರಡಿಸುವ ಮೂಲಕ ಪೊಲೀಸರಿಗೆ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಕ್ಕೆ ಡಿಜಿಐಜಿಪಿ ಪ್ರವೀಣ್ ಸೂದ್ ಪೊಲೀಸ್ ವರ್ಗಾವಣೆ ಸಂಬಂಧ ನಿಯಮ ಮರು ಜಾರಿಗೆ ಅನುಮತಿ ನೀಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಇದಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಈಗ ಅಂತರ್ ಜಿಲ್ಲೆ, ಘಟಕ ಮತ್ತು ವಲಯ ವರ್ಗಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ಪೊಲೀಸರ ವೈಯಕ್ತಿಕ ಸಮಸ್ಯೆ ಕಾರಣಕ್ಕೆ ವರ್ಗಾವಣೆಗೆ ಸರ್ಕಾರ ಸ್ಪಂದಿಸುವಂತೆ ಆಗಿದೆ. ಇದೀಗ್ ಮತ್ತೆ ಅಂತರ್ ಜಿಲ್ಲೆ, ಘಟಕ ಮತ್ತು ವಲಯ ವರ್ಗಾವಣೆಯನ್ನು ಮರು ಜಾರಿಗೊಳಿಸಲಾಗಿದ್ದು ಚುನಾವಣೆಯ ಸಮಯದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪೊಲೀಸರಿಗೆ ವರ್ಗಾವಣೆಯ ಭಾಗ್ಯ ನೀಡಿದೆ.