ತುಮಕೂರು: ಬೈಕ್ಗೆ ಕಾರು ಡಿಕ್ಕಿಯಾಗಿರುವ ಪರಿಣಾಮ ಬೈಕ್ನಲ್ಲಿದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿ ನಡೆದಿದೆ. ಅಪಘಾತದಲ್ಲಿ ಕ್ಯಾತಸಂದ್ರದ ಸಂತೋಷ್, ನಾಗೇಶ್, ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಬೆಂಗಳೂರು ನಿಮಾನ್ಸ್ ಗೆ ದಾಖಲು ಮಾಡಲಾಗಿದೆ. ಇನ್ನು ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದ್ದು, ಡಿಕ್ಕಿ ಬಳಿಕ ಮೂವರು ಆಕಾಶದ ಎತ್ತರಕ್ಕೆ ಹಾರಿಕೊಂಡು ಬಿದ್ದಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.