ವಿಜಯಪುರ: ದೇವಸ್ಥಾನದಲ್ಲಿ ದೇವರ ಮೂರ್ತಿ ಮೇಲಿನ ಚಿನ್ನ, ಬೆಳ್ಳಿಯನ್ನು ಕಳ್ಳನೋರ್ವ ಕಳ್ಳತನಗೈದು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಜೇವೂರ ಗ್ರಾಮದಲ್ಲಿ ನಡೆದಿದೆ. ಜೇವೂರ ಗ್ರಾಮದ ಶ್ರೀರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ದೇಗುಲದ ಗದ್ದುಗೆ ಮೇಲಿನ 8 ಕೆಜಿ ಬೆಳ್ಳಿ, 3 ತೊಲಿ ಚಿನ್ನದ ಆಭರಣ ಸೇರಿದಂತೆ ಲಕ್ಷಾಂತರ ಮೌಲ್ಯದ ವಿವಿಧ ವಸ್ತುಗಳನ್ನು ದೋಚಿಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಕಳ್ಳತನದ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.