ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಯತ್ನಾಳ ಗೆಲುವು ಹಿನ್ನೆಲೆ ಕಾರ್ಯಕರ್ತನೋರ್ವ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ. ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸುತ್ತಿದಂತೆ ವಿಜಯೋತ್ಸವ ನಡೆಯಿತು. ಈ ವೇಳೆ ಕಾರ್ಯಕರ್ತ ಖಡ್ಗ ಪ್ರದರ್ಶನ ಮಾಡುವ ಮೂಲಕ ಅಸಭ್ಯ ವರ್ತನೆ ಮಾಡಿದ್ದಾನೆ. ಅಲ್ಲದೇ, ಕೈಯಲ್ಲಿ ಖಡ್ಗ ಹಿಡಿದುಕೊಂಡು ಪ್ರದರ್ಶನ ಮಾಡಿದ್ದಾನೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ..