ವಿಜಯಪುರ: ತೋಟದ ಬಾವಿಯಲ್ಲಿ ಈಜಲು ಹೋಗಿ ಈಜಲು ಬಾರದೇ ಯುವಕ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮೊರಟಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 17 ವರ್ಷದ ಪ್ರವೀಣ್ ಗೊಂದಳಿ ಮೃತಪಟ್ಟಿರುವ ದುರ್ದೈವಿ. ಮೊರಟಗಿ ಗ್ರಾಮದ ಬಾಬುಗೌಡ ಜಗಶೆಟ್ಟಿ ಎಂಬುವರ ಬಾವಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಮೃತ ದೇಹ ಹೊರಗಡೆಗೆ ತೆಗೆದಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/06/IMG_20230609_210145-1024x572.jpg)