ವಿಜಯಪುರ: ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಗೆ ಹಿನ್ನಲೆ ಅಕ್ರಮವಾಗಿ ಬೈಕ್ನಲ್ಲಿ ಮದ್ಯ ಸಾಗಾಟಕ್ಕೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾದ ಕೆಡಿ ಗ್ರಾಮದಲ್ಲಿ ನಡೆದಿದೆ.
ಸಾತಲಗಾಂವ ನಿವಾಸಿ ರವಿಕಾಂತ ಬಸವರಾಜ್ ಪಾಟೀಲ ಬಂಧಿತ ಆರೋಪಿ. ಇನ್ನು ಆರೋಪಿಯಿಂದ ಮದ್ಯ ಹಾಗೂ ಒಂದು ಬೈಕ್ನ್ನು ಪೊಲೀಸರು ಜಪ್ತಿಗೈದಿದ್ದಾರೆ. ಈ ಕುರಿತು ಇಂಡಿ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.