ವಿಜಯಪುರ: ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಆಫರ್ ಬಂದಿದೆ ಎಂದು ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಬಾಂಬ್ ಸಿಡಿಸಿದರು.
ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸಿದಂತೆ ಬೇರೆ ಪಕ್ಷಗಳಿಂದ ಆಫರ್ ಬರ್ತಿವೆ. ನಾನು ಆಫರ್ ಗಳಿಗೆ ತಲೆ ಕೆಡಿಸಿಕೊಂಡಿಲ್ಲ. ಬಿಜೆಪಿ, ಕಾಂಗ್ರೆಸ್ ನಿಂದ ಪಕ್ಷಕ್ಕೆ ಬರುವಂತೆ ಒತ್ತಡ ಇದೆ ಎಂದರು.
ಇನ್ನು ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯಿಂದಲು ಪಕ್ಷಕ್ಕೆ ಬರುವಂತೆ ಒತ್ತಡ ಇದೆ. ಬಿಜೆಪಿಯಲ್ಲಿ ದೊಡ್ಡವರಿದ್ದರು ನನಗೆ ಆಹ್ವಾನ ಇದೆ. ಆದ್ರೇ,
ಜನರೇ ನಾನು ಯಾವ ಪಕ್ಷದಲ್ಲಿರಬೇಕು ಅನ್ನೋ ತೀರ್ಮಾನ ತೆಗೆದುಕೊಳ್ತಾರೆ ಎಂದರು.