ವಿಜಯಪುರ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿ ಚಿನ್ನ, ಬೆಳ್ಳಿ, ನಗದು ಕಳ್ಳತನಗೈದು ಪರಾರಿಯಾಗಿರುವ ಘಟನೆ ವಿಜಯಪುರದ ರಹೀಂ ನಗರದಲ್ಲಿ ನಡೆದಿದೆ. ಪರ್ವೀನ ನಜೀರ್ ಶೇಖ ಎಂಬುವರ ಮನೆ ಕಳ್ಳತನ ಆಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ 1 ತೋಲಿ ಚಿನ್ನ, 4 ತೋಲಿ ಬೆಳ್ಳಿ, 5 ಸಾವಿರ ರೂಪಾಯಿ ಕಳ್ಳತನಗೈದು ಪರಾರಿಯಾಗಿದ್ದಾರೆ. ಸ್ಥಳಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಂಧಿಚೌಕ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/10/IMG_20231024_202016-1024x584.jpg)