ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿ ಸೇತುವೆಯ ಮೇಲೆ ಹೊರಟಿದ್ದ ಕುರಿಗಳ ಹಿಂಡಿನ ಮೇಲೆ ವಾಹನ ಹಾಯ್ದಿದ್ದರಿಂದ 20 ಕುರಿಗಳು ಸ್ಥಳದಲ್ಲೇ ಮೃತಪಟ್ಡಿದ್ದು, 14 ಕುರಿಗಳು ಗಾಯಗೊಂಡಿವೆ.
ಬೀಳಗಿ ತಾಲೂಕಿನ ಕಂದಗಲ್ ಗ್ರಾಮದ ಮುತ್ತಪ್ಪ ಸಿದ್ದಪ್ಪ ಕುರಿ ಎಂಬುವರುಗೆ ಸೇರಿದ ಕುರಿಗಳು ಮೃತಪಟ್ಟಿವೆ. ಕುರಿಗಾಹಿ ಸಿದ್ದಪ್ಪನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸ್ ಪಿಎಸ್ ಐ ಪ್ರೀತಮ್ ನಾಯಕ ಭೇಟಿ ನೀಡಿ ತುರ್ತು ಕ್ರಮ ಕೈಗೊಂಡಿದ್ದಾರೆ. ಕೊಲ್ಹಾರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.