ವಿಜಯಪುರ: ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರದ ಜಲನಗರದಲ್ಲಿ ಸೋಮವಾರ ನಡೆದಿದೆ.
ಜಾವೇದ್ ಜುಮನಾಳ, ಮಸ್ತಾನ್ ಜಾನ್ವೇಕರ್ ಬಂಧಿತ ಆರೋಪಿಗಳು. ಒಟ್ಟು ಮೂರು ಪ್ರಕರಣದಲ್ಲಿ 144 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ 9.28 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿಗೈದಿದ್ದಾರೆ. ಅಲ್ಲದೇ, ನಗರಾದ್ಯಂತ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕ್ರೈ ಪಿಎಸ್ಐ ಜ್ಯೋತಿ ಕೋತ ನೇತೃತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಈ ಕುರಿತು ಜಲನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.