ವಿಜಯಪುರ: ತೋಟದ ಮನೆಯಲ್ಲಿ ನಿಲ್ಲಿಸಿದ ಬೈಕ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಪ್ಪ ಬಿರಾದಾರ ಎಂಬುವರ KA 28 EB 4385 ಬೈಕ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇನ್ನು ತಡರಾತ್ರಿ ಕಿಡಿಗೇಡಿಗಳು ಬೈಕ್ಗೆ ಬೆಂಕಿ ಹಚ್ಚಿದ್ರಿಂದ ಬೈಕ್ ಸಂಪೂರ್ಣ ಭಸ್ಮವಾಗಿದೆ. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.