ಗದಗ: ಕೃಷಿ ಹೊಂಡದ ನೀರಲ್ಲಿ ಮುಳಗಿ ಮೂವರು ಸಾವನ್ನಪ್ಪಿ, ಇಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಅಂಕಿತಾ ಲಮಾಣಿ(೧೩), ಸುನಿತಾ ಲಮಾಣಿ (೧೦), ಸುನಿತಾ,(೧೧) ಮೃತ ದುರ್ದೈವಿಗಳು. ಇನ್ನು ಐವರು ಸೇರಿಕೊಂಡು ಕೃಷಿ ಹೊಂಡದ ನೀರು ಕುಡಿಯಲು ಹೋಗಿ ಹೊಂಡದಲ್ಲಿ ಜಾರಿ ಬಿದ್ದು ಅಸುನೀಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ಪರಿಶೀಲನೆ ನಡೆಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.