ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿರುವ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಸಮೀಪದ ಬೈರವಾಡಿ ಕ್ರಾಸ್ ಬಳಿ ಸಂಭವಿಸಿದೆ. ಹುಸೇನಪಾಷಾ ಮುಜಾವರ್, ಅಸ್ಲಾಂ ನದಾಫ್, ಮಹಮ್ಮದ್ ಮುಜಾವರ್ ಮೃತಪಟ್ಟಿರುವ ದುರ್ದೈವಿಗಳು. ವಿಜಯಪುರದಿಂದ ಬಿಂಜಲಭಾವಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/07/IMG-20230710-WA0036-1024x576.jpg)