ವಿಜಯಪುರ: ಕರ್ನಾಟಕ ರಾಜ್ಯ ಮಹಾ ಶಿವಶರಣ ಹರಳಯ್ಯ ಸರಕಾರಿ, ಅರೆಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸ್ಥಾಪಿತವಾದ ಹರಳಯ್ಯ ನೌಕರರ ಕೋ-ಆಪರೆಟಿವ್ ಸೋಸೈಟಿಯ 6ನೇ ವರ್ಷದ ಸರ್ವ ಸಾಧಾರಣ ಸಭೆ ಹಾಗೂ ಶ್ರೀ ಬಸವೇಶ್ವರ ಸಂಘ, ಶ್ರೀ ಹರಳಯ್ಯ ಯುವಕ ಸಂಘದ ಸಹಯೋಗದಲ್ಲಿ ಹರಳಯ್ಯ ಸಮುದಾಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 75 ಕ್ಕೂ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರಸಕ್ತ ವರ್ಷದಲ್ಲಿ ನಿವೃತ್ತಿಯಾದ ನೌಕರರಿಗೆ ಸನ್ಮಾನ ಸಮಾರಂಭ ವಿಜಯಪುರ ನಗರದ ಗ್ಯಾಂಗ್ ಬಾವಡಿಯಲ್ಲಿರುವ ರಾಯಲ್ ಪ್ಯಾಲೇಸ್ ನಲ್ಲಿ ಸೆ.18 ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಜರುಗುವುದು. ಎಲ್ಲ ಹರಳಯ್ಯ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಹರಳಯ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿದ್ದಪ್ಪ ಅವಜಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಹರಳಯ್ಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಕನಸೆ, ಸೋಸೈಟಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶ್ರೀ ಬಸವೇಶ್ವರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಯುವಕ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿ ಹರಳಯ್ಯ ಸಮುದಾಯ ಬಾಂದವರೇಲ್ಲ ವತಿಯಿಂದ ಸರ್ವರಿಗೂ ಆದರದ ಸುಸ್ವಾಗತ ಕೋರಲಾಗಿದೆ.