ವಿಜಯಪುರ: ಕೃಷ್ಣಾ, ಮಹಾದಾಯಿ, ನವಲಿ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಏಪ್ರಿಲ್ 13 ರಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಅಧ್ಯಕ್ಷ ಎಸ್ಆರ್ ಪಾಟೀಲ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಅಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಬೆಳಗ್ಗೆ 9:30ಕ್ಕೆ ದಿಂಗಾಲೇಶ್ವರ ಸ್ವಾಮಿ ಉದ್ಘಾಟನೆ ಮಾಡಲಿದ್ದು, ತದನಂತರ ಶಿರಹಟ್ಟಿಯಿಂದ ಬೀಳಗಿಯ ಬಾಡಗಂಡಿಯ ಬಾಪೂಜಿ ಅಂತರರಾಷ್ಟ್ರೀಯ ಶಾಲೆಯಲ್ಲಿ ಮೆರವಣಿಗೆ ನಡೆಸಿ, ಏಪ್ರಿಲ್ 17ರಂದು 3:30ಕ್ಕೆ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಅದಕ್ಕಾಗಿ ಬನ್ನಿ, ಕೈಗೆ ಕೈ ಜೋಡಿಸಿ, ರ್ಯಾಲಿ ಯಶಸ್ವಿಗೊಳಿಸಿ ಎಂದರು.