ವಿಜಯಪುರ: ಯುಗಾದಿ ಅಮಾವಾಸ್ಯೆಯಂದು ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನದಿ ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ಕಾರಜೋಳ ಗ್ರಾಮದ ಸುದೀಪ(ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಎಂದು ಬಾಲಕರು ನದಿಪಾಲು ಆಗಿದ್ದಾರೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ಇತ್ತು. ಕಾರಜೋಳ ಗ್ರಾಮದಿಂದ ಕೃಷ್ಣಾ ನದಿಗೆ ದೇವಿಯ ಪಲ್ಲಕ್ಕಿ ಹೊತ್ತು, ದೇವಿಯ ಸ್ನಾನ ಮಾಡಿಸಿಕೊಂಡು ಬರಲು ಗ್ರಾಮಸ್ಥರು ತೆರಳಿದ್ದರು.
ಮೃತಬಾಲಕರು ತಂದೆ- ತಾಯಿಗಳ ಜೊತೆ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಇಬ್ಬರ ಬಾಲಕರ ಶವವನ್ನು ಪೊಲೀಸರು, ಸ್ಥಳೀಯರು ತೆಗೆದಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಕೃಷ್ಣಾ ನದಿಯ ಪಾಲಾದ ಇಬ್ಬರು ಬಾಲಕರು
![](https://karnataka1news.com/wp-content/uploads/2024/04/IMG_20221212_183635-860x447.jpg)