ವಿಜಯಪುರ: ನೀರಿನ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ವಾಗಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಿಶ್ಯಾಳ ಪಿಬಿ ಗ್ರಾಮದಲ್ಲಿ ನಡೆದಿದೆ.
7 ವರ್ಷದ ರಮೇಶ, 11 ವರ್ಷದ ಮಾಳಿಂಗರಾಯ ಮೃತಪಟ್ಟಿರುವ ದುರ್ದೈವಿ. ಇನ್ನೂ ಜಮೀನಿನಲ್ಲಿ ದನ ಮೇಯಿಸಿಕೊಂಡು ಕೃಷಿ ಹೊಂಡ ಹತ್ತಿರ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇ ನೀಡಿ ಪರಿಶೀಲನೆ ನಡೆಸಿದರು. ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.