ವಿಜಯಪುರ: ಬಸ್ ಏರುವಾಗ ಚಿನ್ನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ನಗರದ ಕೇಂದ್ರ ಹಾಗೂ ಸೇಟ್ಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೈನಾಬಾಯಿ ಕಾಳೆ ಹಾಗೂ ಸುಮನ ಕಾಳೆ ಬಂಧಿತ ಆರೋಪಿಗಳು. ಇನ್ನು ಬಂಧಿತ ಆರೋಪಿಗಳಿಂದ 7.50 ಲಕ್ಷ ಮೌಲ್ಯದ 125 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.