ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಸವನಬಾಗೇವಾಡಿ ಕ್ರಾಸ್ ಹತ್ತಿರ ನಡೆದಿದೆ. ಅಶೋಕ ದೇಸ್ನೂಯಿ(25), ಲಿಂಬಾರಾಮ ದೇಸ್ನೂಯಿ(35) ದಹನವಾದ ದುರ್ದೈವಿಗಳು.
ಹೆದ್ದಾರಿ ಪಕ್ಕದಲ್ಲಿದ್ದ ಎರಡು ಪ್ಲಾಸ್ಟಿಕ್ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇನ್ನು ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿರುವ ಪರಿಣಾಮ ಸಾಲು ಸಾಲಾಗಿದ್ದ ಏಳೆಂಟು ಪ್ಲಾಸ್ಟಿಕ್ ಅಂಗಡಿಗಳ ರಕ್ಷಣೆ ಆಗಿದೆ. ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.