ವಿಜಯಪುರ: ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇಂಡಿ ಪಟ್ಟಣದ ಬೀರಪ್ಪ ನಿಂಗಪ್ಪ ಅವರಾದಿ (15) ಹಾಗೂ ಇಂಡಿ ತಾಲೂಕಿನ ಮಸಳಿ ಬಿಕೆ ಗ್ರಾಮದ ಸೋಮಶೇಖರ ಕಾಶೀನಾಥ ಪಟ್ಟಣಶೆಟ್ಟಿ (45) ಮೃತಪಟ್ಟವರು.ಗುರುವಾರ ಸಂಜೆ ಬೀಸಿದ, ಗಾಳಿ, ಮಳೆಯಲ್ಲಿ ಏಕಾಏಕಿ ಸಿಡಿಲು ಬಡಿದಿದ್ದರಿಂದ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಸ್ಥಳಗಳಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪ್ರಕರಣ ದಾಖಲಿಕೊಂಡಿರುವ ಇಂಡಿ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.