ವಿಜಯಪುರ: ಸಾರ್ವಜನಿಕರ ಸ್ಥಳದಲ್ಲಿಯೇ ಅಕ್ರಮವಾಗಿ ಓಸಿ ಮಟಕಾ ಬರೆದುಕೊಳ್ಳುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರದ ತಿಡಗುಂದಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಕಾಶ ಸಾಬು ಕಳಸೆ ವಿರುದ್ಧ ದೂರು ದಾಖಲಾಗಿದ್ದು, ಸಾರ್ವಜನಿಕರಿಗೆ 1 ರೂಪಾಯಿಗೆ 80 ರೂಪಾಯಿ ನೀಡುವ ಆಮೀಷ್ ನೀಡಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿಗೈದು 3600 ನಗದು ಹಾಗೂ ಓಸಿ ಸಾಮಗ್ರಿಗಳನ್ನು ಜಪ್ತಿಗೈದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
——–
ಅಕ್ರಮವಾಗಿ ಅಂದರ್ ಬಾಹರ್ ಆಟವಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಆರೇಶಂಕರ ಗ್ರಾಮದಲ್ಲಿ ನಡೆದಿದೆ. ಸುರೇಶ ಈಳಗೇರ, ವಿಠಲ್ ಅಸ್ಕಿ, ಲಕ್ಕಪ್ಪ ಮೇಟಿ, ಮಾನಿಂಗಪ್ಪ ಮಕಾಶಿ ವಿರುದ್ಧ ದೂರು ದಾಖಲಾಗಿದೆ. ಇನ್ನು ಇಸ್ಪೀಟ್ ಎಲೆಗಳಲ್ಲಿ ಮಗ್ನರಾಗಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದು 1460 ನಗದು, ಇಸ್ಪೀಟ್ ಎಲೆಗಳನ್ನು ಜಪ್ತಿಗೈದಿದ್ದಾರೆ. ಈ ಕುರಿತು ನಿಡಗುಂದಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
——–
ಅಕ್ರಮವಾಗಿ ಇಸ್ಪೀಟ್ ಆಡುವಾಗ ಪೊಲೀಸರು ದಾಳಿಗೈದು ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ತಾಲ್ಲೂಕಿನ ಜುಮನಾಳ ಸವನಳ್ಳಿ ರಸ್ತೆಯಲ್ಲಿ ನಡೆದಿದೆ. ಹಣಮಂತ, ಈರಣ್ಣಾ, ಮಂಜುನಾಥ, ಸಿದ್ದಪ್ಪ, ಶಿವಾನಂದ, ಮಹೇಶ, ಶಿವಕುಮಾರ್, ಲಕ್ಕೊಂಡ, ಮಾಳಪ್ಪ, ಅಪ್ಪು ಬಂಧಿತ ಇಸ್ಪೀಟ್ ಆರೋಪಿಗಳು. ಅಲ್ಲದೇ, ಇವರಿಂದ 19,110 ನಗದು, ಇಸ್ಪೀಟ್ ಎಲೆಗಳನ್ನು ಜಪ್ತಿಗೈದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
——–
ಅಕ್ರಮವಾಗಿ ಪಾನ್ಶಾಪ್ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮಾಲೀಕನನ್ನು ಬಂಧಿಸಿ ಮದ್ತ ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹತ್ತಳ್ಳಿ ಗ್ರಾಮದಲ್ಲಿ ನಡೆದಿದೆ. ಮೆಹಬೂಬ್ ನದಾಫ್ ವಿರುದ್ಧ ದೂರು ದಾಖಲಾಗಿದ್ದು, ತನ್ನ ಅಂಗಡಿಯಲ್ಲಿ ಮದ್ಯ ಪೌಚ್ ಇಟ್ಟುಕೊಂಡು ಮಾರಾಟ ಮಾಡುವ ವೇಳೆಯಲ್ಲಿ ಪೊಲೀಸರು ದಾಳಿಗೈದು 5272 ಮೌಲ್ಯದ ಮದ್ಯ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.