ವಿಜಯಪುರ: ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯಿಂದ ವೀರಶೈವ ಲಿಂಗಾಯತ ಜಾಗತಿಕ ವ್ಯವಹಾರ ಶೃಂಗಸಭೆ ಹಮ್ಮಿಕೊಳ್ಳಲಾಗಿದೆ ಎಂದು ಐಲೈಫ್ ಸಂಸ್ಥಾಪಕ ಸಿದ್ದರಾಮ ಜತ್ತಿ ಹೇಳಿದರು.
ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ನೇತೃತ್ವದಲ್ಲಿ ಜನವರಿ20 ರಿಂದ 22ರ ವರೆಗೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗಸಭೆ ಹಮ್ಮಿಕೊಳ್ಳಲಾಗಿದೆ. ವೀರಶೈವ ಲಿಂಗಾಯತರಿಗೆ ಉದ್ಯಮಿಗಳು, ಉದ್ಯಮೀಶೀಲರನ್ನು, ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವ ಉದ್ದೇಶ ಹೊಂದಲಾಗಿದೆ. ಅಲ್ಲದೇ, ವೀರಶೈವ ಲಿಂಗಾಯತ ಸಮಾಜದ ಆರ್ಥಿಕ ಬೆಳವಣಿಗೆಗೆ, ಸಮಾಜಮುಖಿ ಕೆಲಸಕ್ಕಾಗಿ ಶೃಂಗಸಭೆ ಆಯೋಜಿಸಿದ್ದು, ಅದಕ್ಕಾಗಿ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಂಡರು.
*ಸಭೆಯ ಮಹತ್ವ*
ರಾಜ್ಯದಲ್ಲಿ ರೈತ ಸಮುದಾಯವನ್ನು ತನ್ನ ಸಂಪೂರ್ಣ ಸಾಮರ್ಥ್ಯ ಬಳಸಿಕೊಳ್ಳಲು ತಂತ್ರಜ್ಞಾನ ಆಧಾರಿತ ಕೃಷಿ ಪರಿಹಾರ ಅನ್ವೇಷಿಸುವುದು. ವೀರಶೈವ ಲಿಂಗಾಯತ ಸಮುದಾಯದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯ ಪ್ರದರ್ಶನ ಮಾಡುವುದು ಸೇರಿದಂತೆ 9 ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.