ವಿಜಯಪುರ: ಟಿಪ್ಪು ಸುಲ್ತಾನ್ಗೆ ಹುಟ್ಟಿದ ಮಕ್ಕಳು ನಾವು ಎಂದು ಅಲ್ಪಸಂಖ್ಯಾತ ಮುಖಂಡ ಎಸ್ ಎಸ್ ಖಾದ್ರಿ ಹೇಳಿದರು.
ವಿಜಯಪುರ ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸಾವರ್ಕರ್ ಮಕ್ಕಳು ಅಲ್ಲ. ನಾವು ಟಿಪ್ಪು ಸುಲ್ತಾನ್ಗೆ ಹುಟ್ಟಿದ ಮಕ್ಕಳು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕಿಡಿಕಾರಿದರು. ಅಲ್ಲದೇ, ನಾವು ಟಿಪ್ಪು ಸುಲ್ತಾನ್ ಮಕ್ಕಳು ಎಂದು ಎದೆ ತಟ್ಟಿಕೊಂಡು ಹೇಳ್ತೇವೆ ಎಂದರು. ಇನ್ನೂ ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಪಕ್ಕಾ ಮಾಹಿತಿ ನೀಡಿದ್ರೇ ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆ ಎಂದು ಸವಾಲು ಹಾಕಿದರು.
ವಿಜಯಪುರ ನಗರ ಮತಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಉದ್ಯಮಿ ರಫೀಕ್ಅಹ್ಮದ ಖಾನೆ ಆಗ್ರಹಿಸಿದರು. ನಗರ ಮತಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕ ಆಗಿದೆ. ಎಲ್ಲ ಕ್ಷೇತ್ರಗಳಲ್ಲಿ ಬೇರೆ ಬೇರೆ ಸಮುದಾಯದ ಅಭ್ಯರ್ಥಿಗಳಿಗೆ ಮುಸ್ಲಿಂರು ಮತ ಹಾಕುತ್ತಾರೆ. ಆದ್ರೇ, ಕಾಂಗ್ರೆಸ್ ನಾಯಕರು ಬಿಜೆಪಿ ಅಭ್ಯರ್ಥಿ ಜೊತೆ ಹೊಂದಾಣಿಕೆ ಆಗಿದ್ದಾರೆ. ಅದಕ್ಕಾಗಿ ಈ ಬಾರಿ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಶ್ರೀಸಿದ್ದೇಶ್ವರ ದೇವಾಲಯಕ್ಕೆ ತೆರಳಿ ಪ್ರಮಾಣ ಮಾಡಿ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.