ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆ ತಡೆಯಾಜ್ಞೆಗೆ ಸಲ್ಲಿಸಿದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ್ದು, ಇದರಿಂದ ಕಾಂಗ್ರೆಸ್ಗೆ ಹಿನ್ನಡೆ ಆಗಿದೆ.
ಅಲ್ಲದೇ, ಈ ಬಗ್ಗೆ ವಿಜಯಪುರ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಮಾತನಾಡಿ, ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು. ಈ ಆದೇಶಕ್ಕೆ ನಾವು ತಲೆ ಬಾಗುತ್ತೇವೆ. ಆದ್ರೇ, ಸರ್ಕಾರ ಮಾತ್ರ ಅಧಿಕಾರಿವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು.
ಅಲ್ಲದೇ, ಕಾಂಗ್ರೆಸ್ ನಾಯಕರು, ಮುಖಂಡರೊಂದಿಗೆ ಚರ್ಚೆ ಮಾಡುತ್ತೇವೆ. 35 ವಾರ್ಡ್ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕೆ ಇಳಿಸಿ, ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸುತ್ತೇವೆ ಎಂದರು.