ವಿಜಯಪುರ: ಟೈಯರ್ ಬ್ಲಾಸ್ಟ್ ಆಗಿ ಏಕಾಏಕಿ
ಜನತಾ ಟ್ರಾವೆಲ್ಸ್ಗೆ ಸೇರಿದ ಬಸ್ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಬಳಿ ನಡೆದಿದೆ. ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದಾಗ
ಬಸ್ ಟೈಯರ್ ಬ್ಲಾಸ್ಟ್ ಆಗಿದೆ. ಟೈಯರ್ ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ಕೆಳಗೆ ಇಳಿದು ಸೇಫ್ ಆಗಿದ್ದಾರೆ. ಆದ್ರೇ, ಪ್ರಯಾಣಿಕರ ಎಲ್ಲ ಲಗೇಜ್ ಬೆಂಕಿಗಾಹುತಿ ಆಗಿವೆ. ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಖಾಸಗಿ ಬಸ್ ಬೆಂಕಿಗಾಹುತಿ | ಪ್ರಯಾಣಿಕರಿಗೆ ಏನಾಯ್ತು..?
![](https://karnataka1news.com/wp-content/uploads/2023/12/IMG_20231215_081002-860x865.jpg)