ವಿಜಯಪುರ: ಅಂಗನವಾಡಿ ಮಕ್ಕಳ ಆಹಾರ ಪದಾರ್ಥಗಳನ್ನು ಅಂಗನವಾಡಿ ಶಿಕ್ಷಕಿ ಅಕ್ರಮವಾಗಿ ಸಾಗಾಟ ಮಾಡುವ ವೇಳೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗಣಿಹಾರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಪದ್ಮಾ ಮ್ಯಾಗೇರಿ ಸಿಕ್ಕಿಬಿದ್ದಿರುವ ಶಿಕ್ಷಕಿ. ಗಣಿಹಾರ ಗ್ರಾಮದ ಅಂಗನವಾಡಿಯಲ್ಲಿರುವ ವಿವಿಧ ಆಹಾರ ಪದಾರ್ಥಗಳನ್ನು ಕಳ್ಳಸಾಗಣೆ ಮಾಡುವಾಗ ಸ್ಥಳೀಯರು ರೈಡ್ಹ್ಯಾಂಡ್ ಹಿಡಿದುಕೊಂಡಿದ್ದಾರೆ. ಅದಕ್ಕಾಗಿ ಸೂಕ್ತ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.