ವಿಜಯಪುರ: ಕುರಿಗಳ ಮೇಲೆ ತೋಳಗಳು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.
ಈರಪ್ಪ ಮಲ್ಲಪ್ಪ ಗೋಟ್ಯಾಳ ಎಂಬುವರಿಗೆ ಸೇರಿದ 20ಕ್ಕೂ ಹೆಚ್ಚು ಕುರಿಗಳು ಅಸುನೀಗಿದ್ದಾವೆ. ಕುರಿಗಾಯಿ ಈರಪ್ಪ ಕಣ್ಣೀರು ಹಾಕುತ್ತಿದ್ದಾನೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಮಹೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.