ವಿಜಯಪುರ:ಕೃಷ್ಣ ನದಿ ಸೇತುವೆ ಮೇಲಿಂದ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ ಕೃಷ್ಣಾ ನದಿ ಸೇತುವೆ ಬಳಿ ನಡದಿದೆ.
ಕೋಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಶಾಂತವ್ವ ಬಸಪ್ಪ ಜಂಬಗಿ(35)ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅನಾರೋಗ್ಯದಿಂದ ಬಳಲುತ್ತಿರುವುದಕ್ಕೆ ಮನನೊಂದು ಸೇತುವೆ ಮೇಲಿಂದ ಕೃಷ್ಣ ನದಿಗೆ ಹಾರಿದ್ದಾಳೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರೀಶಿಲಿಸಿದರು. ಕೋಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.