ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತರಿಗೆ ಪೋಕ್ಸೋ ಮತ್ತು ಜೆಜೆ ಆ್ಯಕ್ಟ್ ಕುರಿತ ಒಂದು ದಿನದ ಕಾರ್ಯಾಗಾರ ಸೆ. 12 ರಂದು ಬೆಳಗ್ಗೆ 10.30 ಕ್ಕೆ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಉದ್ಘಾಟಿಸಿ ಪೋಕ್ಸೋ ಕಾಯ್ದೆ ಕುರಿತು ಸುದೀರ್ಘವಾಗಿ ಮಾತನಾಡಲಿದ್ದಾರೆ.
ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಪಾಲ್ಗೊಳ್ಳಲಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಎಲ್ಲ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಿಐಎಫ್ ಸಿ ಗುಡ್ ಯೋಜನೆಯ ಜಿಲ್ಲಾ ಸಂಯೋಜಕಿ ಶಾಂತಾ ಬೇಲಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.